ಸರ್ಕಾರದ ಅಂಕಿ ಅಂಶಗಳ ಪ್ರಕಾರ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ ಜಿಲ್ಲೆಯು – ಉನ್ನತ ಶಿಕ್ಷಣ, ಸ್ನಾತಕೋತ್ತರ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಅಲ್ಲದೆ, ಈ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವ ಹಿತದೃಷ್ಟಯಿಂದ ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ 06 ಕಿ.ಮೀ. ದೂರದಲ್ಲಿರುವ ಗುಡ್ಡದ ರಂಗವ್ವನಹಳ್ಳಿಯಲ್ಲಿ 82 ಎಕರೆ ಊಧ್ರ್ವ ಪ್ರದೇಶದಲ್ಲಿ, ರಾಷ್ಟ್ರೀಯ ಹೆದ್ದಾರಿ -13ರಲ್ಲಿ ಸ್ನಾತಕೋತ್ತರ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಈ ಕೇಂದ್ರದಲ್ಲಿ 2010-11ನೇ ಶೈಕ್ಷಣಿಕ ಸಾಲಿನಿಂದ ಸ್ನಾತಕೋತ್ತರ ಅರ್ಥಶಾಸ್ತ್ರ; ವಾಣಿಜ್ಯಶಾಸ್ತ್ರ; ಶಿಕ್ಷಣಶಾಸ್ತ್ರ; ಕನ್ನಡ; ಇಂಗ್ಲೀಷ್ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಈ ಕೇಂದ್ರದಲ್ಲಿ 2018-19ನೇ ಸಾಲಿನಲ್ಲಿ ವಿಜ್ಞಾನ ನಿಕಾಯದಡಿಯಲ್ಲಿ ಸಸ್ಯಶಾಸ್ತ್ರ ಕೋರ್ಸ್ ಪ್ರಾರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಹಾಗೂ ಉದ್ಯೋಗಾಧಾರಿತ ಕೋರ್ಸುಗಳನ್ನು ಪ್ರಾರಂಭಿಸುವ ಉದ್ದೇಶವನ್ನು ಈ ವಿಶ್ವವಿದ್ಯಾನಿಲಯ ಹೊಂದಿರುತ್ತದೆ.